Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ್ರೆ ಒಂದೇ ವಾರದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಾಸ್:-ಮಾಜಿ ಸಿ.ಎಂ. ಸಿದ್ದರಾಮಯ್ಯ ಹೇಳಿಕೆ.27-12-2021

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆಯೋದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿಧಾನಸಭೆಯಲ್ಲಿ ಮಂಡಿಸಿ ಮತಾಂತರ ನಿಷೇಧ ಕಾಯ್ದೆಗೆ ವಿರೋಧದ ನಡುವೆಯೂ ಒಪ್ಪಿಗೆ ಪಡೆದುಕೊಂಡಿದೆ. ನಮ್ಮ ಸರ್ಕಾರ ಬಂದ್ರೇ ಮೊದಲ ಅಧಿವೇಶನದಲ್ಲೇ ಕಾಯ್ದೆ ಹಿಂಪಡೆಯುತ್ತೇವೆ ಎಂದರು.

ಮತಾಂತರ ನಿಷೇಧ ಕಾಯ್ದೆ ಹುಟ್ಟಿದ್ದು 2009ರಲ್ಲಿ ಆಗಿದೆ. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗಲೇ, ಜಯಚಂದ್ರ ಸಹಿ ಹಾಕಿ ಕ್ಯಾಬಿನೆಟ್ ಮುಂದೆ ತನ್ನಿ ಅಂತ ಹೇಳಿದ್ದೆ. ಆ ಬಳಿಕ ಆಂಜನೇಯ ಸಚಿವರಾಗಿದ್ದಾಗ ಡ್ರಾಫ್ಟ್ ಮಾಡುವಂತೆಯೂ ತಿಳಿಸಿದ್ದೆ. ಅದ್ರೇ ನಾನು ಹೇಳಿದ ನಂತ್ರವೂ ಆಂಜನೇಯ ಇದು ಅಗತ್ಯವಿಲ್ಲ ಎಂದು ಬರದು ಕ್ಯಾಬಿನೇಟ್ ಮುಂದೆ ತಂದಿರಲಿಲ್ಲ ಎಂಬುದಾಗಿ ತಿಳಿಸಿದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo