Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಕೊರೋನಾ ತಡೆಗೆ ವಿಭಿನ್ನ ಪ್ರಯತ್ನ ರಸ್ತೆಗಿಳಿದ ಕೋವಿಡ್ ತದ್ರೂಪಿ 15-1-2022

ಉಡುಪಿ : ಕೊರೊನಾ ಮೂರನೇ ಅಲೆಯು ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ಸಾರ್ವಜನಿಕ ವಲಯದಲ್ಲಿ ಹರಡದಂತೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯಿಂದ ಜಾಗ್ರತಿಮೂಡಿಸುವ ಅಭಿಯಾನವು ನಗರದಲ್ಲಿ ಶನಿವಾರ ನಡೆಯಿತು.
ಕಲ್ಸಂಕ ಸರ್ಕಲ್ ಬಳಿ ಈ ಅಭಿಯಾನಕ್ಕೆ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಹರೀಶ್ ಚಾಲನೆ ನೀಡಿದರು. ಅಭಿಯಾನ ಜಾಥವು ಸಿಟಿ ಬಸ್ಸು ನಿಲ್ದಾಣ, ಸರ್ವಿಸ್ ಬಸ್ಸು ನಿಲ್ದಾಣ ಹಾಗೂ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಈ ವೇಳೆ ಕೊರೊನಾ ಸೂಕ್ಷ್ಮಾಣುವಿನ ಐದು ಅಡಿಯ ಮಾದರಿಯ ತದ್ರೂಪವನ್ನು ರಚಿಸಲಾಗಿತ್ತು. 
ರೋಗಾಣು ಕಲಾಕೃತಿಯೊಳಗಿದ್ದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ನಗರದ ಪ್ರಮುಖ ಮಾರ್ಗಗಳಲ್ಲಿ ಜಾಗ್ರತಿ ಮೂಡಿಸಿ ಗಮನ ಸೆಳೆದರು. ಕೊರೊನಾ ರೋಗಣು ಕಲಾಕೃತಿಯನ್ನು ಕಲಾವಿದರಾದ ಮಹೇಶ್ ಮತ್ತು ಲೊಕೇಶ್ ರಚಿಸಿದ್ದರು. ಅಭಿಯಾನದಲ್ಲಿ ಕೆ.ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು, ರಾಜೇಶ್ ದೇವಾಡಿಗ ಕಾಪು, ಡೇವಿಡ್ ಕುಕ್ಕಿಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo