ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4:00 ಗಂಟೆಗೆ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಲಿದ್ದು, ಸಚಿವರಾದ ಆರ್.ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು, ಬಿ.ಬಿ.ಎಂ.ಪಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕೊರೋನಾ ತಡೆಗೆ ರಾಜ್ಯದಲ್ಲಿ ಸದ್ಯ ವಿಧಿಸಲಾಗಿರುವ ಕಠಿಣ ನಿಯಮಗಳು ಜನವರಿ 19 ಕ್ಕೆ ಅಂತ್ಯವಾಗಲಿವೆ. ಜನವರು 17 ರ ಇಂದು ಬೆಳಗ್ಗೆ 5 ಗಂಟೆಗೆ ವೀಕೆಂಡ್ ಕರ್ಫ್ಯೂ ಕೂಡ ಮುಕ್ತಾಯವಾಗಿದೆ.
ಸಭೆಯಲ್ಲಿ ವೀಕೆಂಡ್ ಕರ್ಫ್ಯೂ, ಕಠಿಣ ನಿಯಮಗಳನ್ನು ಮುಂದುವರೆಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ. 1ರಿಂದ 9 ನೇ ತರಗತಿ ಶಾಲೆಗಳನ್ನು ಬಂದ್ ಮಾಡುವ ಕುರಿತು ಚರ್ಚೆ ಸಾಧ್ಯತೆ ಇದೆ.
ಕೊರೊನಾ ಹರಡದಂತೆ ತಡೆಯಲು ರಾಜ್ಯದಲ್ಲಿ ಮತ್ತಷ್ಟು ಟೈಟ್ ರೂಲ್ಸ್ ಜಾರಿಗೊಳಿಸಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಸೆಮಿಲಾಕ್ ಡೌನ್ ಜಾರಿಗೆ ಕೂಡ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ