Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸ್ಯಾಂಡಲ್‌ವುಡ್ ನಿರ್ಮಾಪಕ ಉಮಾಪತಿ ಕೊಲೆ ಯತ್ನ24-1-2022

ಸ್ಯಾಂಡಲ್‌ವುಡ್ ನಿರ್ಮಾಪಕ ಉಮಾಪತಿ ಕೊಲೆ ಯತ್ನ

ನಿರ್ಮಾಪಕ ಉಮಾಪತಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ 16 ಹಾಗೂ 17ನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜು ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ.

2020ರ ಡಿಸೆಂಬರ್​ನಲ್ಲಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಪಕ ಉಮಾಪತಿ, ಸಹೋದರ ದೀಪಕ್, ರೌಡಿಶೀಟರ್ ಸೈಕಲ್ ರವಿ ಹತ್ಯೆಗೆ ಸಂಚು ರೂಪಿಸಿ ಮಾರಕಾಸ್ತ್ರ ಹಿಡಿದು 15ಕ್ಕಿಂತ ಹೆಚ್ಚು ಮಂದಿ ಪ್ಲ್ಯಾನ್ ಮಾಡಿಕೊಂಡಿದ್ದರು. ಈ ಮಾಹಿತಿ ಅರಿತಿದ್ದ ಅಂದಿನ ಜಯನಗರ ಪೊಲೀಸ್ ಠಾಣೆಯ ಇನ್​​ಸ್ಪೆಕ್ಟರ್ ಹರೀಶ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 10ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿತ್ತು.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo