Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕೋಟತಟ್ಟು ಪೊಲೀಸ್ ದೌರ್ಜನ್ಯ ಪ್ರಕರಣ :-7 ಮಂದಿ ಪೊಲೀಸರ ನಿರೀಕ್ಷಣ ಜಾಮೀನು ಅರ್ಜಿ ವಜಾ 17-2-2022

ಕೋಟ: ಕೋಟತಟ್ಟು ಗ್ರಾಮಕ್ಕೆ ಸಂಬಂಧಿಸಿದಂತೆ ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿಗಳಾದ ಪಿ‌.ಎಸ್‌.ಐ ಹೆಡ್ ಕಾನ್‌ಸ್ಟೇಬಲ್ ಸೇರಿದಂತೆ 7 ಮಂದಿ ಪೊಲೀಸರ ನಿರೀಕ್ಷಣ ಜಾಮೀನು ಅರ್ಜಿಯನ್ನು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಕೋಟತಟ್ಟು ಗ್ರಾಮದಲ್ಲಿ ಕಳೆದ ಡಿಸೆಂಬರ್. 27 ರಂದು ರಾಜೇಶ್ ಅವರ ಮದುವೆ ಮೆಹಂದಿ ಕಾರ್ಯಕ್ರಮ ನಡೆಯುತ್ತಿರುವ ವೇಳೆ ದೌರ್ಜನ್ಯ ನಡೆದಿದೆ ಎಂದು ಪ್ರಕರಣ ದಾಖಲಾಗಿತ್ತು.

 ಇದಕ್ಕೆ ಸಂಬಂಧ ಪಟ್ಟಂತೆ ಜನವರಿ . 3 ರಂದು ಪೊಲೀಸರು ನಿರೀಕ್ಷಣ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಜೋಶಿ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo