ಬೆಂಗಳೂರು: ರಾಜ್ಯಾದ್ಯಂತ ‘ಹಿಟ್ & ರನ್’ ಅಪಘಾತ ಪ್ರಕರಣಗಳ(ಸಿ-ರಿಪೋರ್ಟ್) ಸಂತ್ರಸ್ತರಿಗೆ ದೊಡ್ಡ ಪರಿಹಾರ ನೀಡಲಾಗುವುದು. ಗಾಯಗೊಂಡವರು ಅಥವಾ ಮೃತರ ಕುಟುಂಬ ಸದಸ್ಯರಿಗೆ, ರಾಜ್ಯ ಸರ್ಕಾರ ಪರಿಹಾರ ಮೊತ್ತ ಹೆಚ್ಚಿಸಲು ಆದೇಶಿಸಿದೆ.
ಹೊಸ ಪರಿಹಾರ ದರಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ. ಫೆಬ್ರವರಿ 2022 ರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ(MoRTH) ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಪರಿಹಾರವನ್ನು ಹೆಚ್ಚಿಸಿದೆ.
ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು, ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ಗಾಯಾಳುಗಳಿದ್ದಲ್ಲಿ ಪರಿಹಾರವನ್ನು 12,500 ರೂ.ನಿಂದ 50,000 ರೂ.ಗೆ ಹೆಚ್ಚಿಸಲಾಗಿದೆ ಮತ್ತು ಅದೇ ರೀತಿ ಮರಣ ಹೊಂದಿದಲ್ಲಿ ಪ್ರಸ್ತುತ 50,000 ರೂ.ಗಳ ಪರಿಹಾರವನ್ನು 2 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ.
ಸಾಮಾನ್ಯವಾಗಿ, ಹಲವಾರು ಹಿಟ್ ಅಂಡ್ ರನ್ ರಸ್ತೆ ಅಪಘಾತಗಳಲ್ಲಿ, ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಸಿ-ರಿಪೋರ್ಟ್ ಸಲ್ಲಿಸಿದರೆ, ಜಿಲ್ಲಾಧಿಕಾರಿಗಳು ಸಾಮಾನ್ಯವಾಗಿ ಸಂತ್ರಸ್ತರಿಗೆ ಪರಿಹಾರವನ್ನು ನೀಡುತ್ತಾರೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ