Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸಂಪಾಜೆ ಹೆದ್ದಾರಿಯಲ್ಲಿ ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; ಹಲವರಿಗೆ ಗಾಯ16-3-2022

ಸಂಪಾಜೆ ಹೆದ್ದಾರಿಯಲ್ಲಿ ಟಯರ್ ಸ್ಫೋಟಗೊಂಡು ಹೊಳೆಗೆ ಉರುಳಿದ ಬಸ್; ಹಲವರಿಗೆ ಗಾಯ

ಸುಳ್ಯ: ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ ಎದುರಿನ ಚಕ್ರ ಸ್ಫೋಟಗೊಂಡು ಸರಕಾರಿ ಬಸ್ಸೊಂದು ರಸ್ತೆ ಬದಿಯ ಹೊಳೆಗೆ ಉರುಳಿದ ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಮಾ.17ರಂದು ನಡೆದಿದೆ.
ಧರ್ಮಸ್ಥಳದಿಂದ – ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ಟಯರ್ ಸ್ಪೋಟಗೊಂಡು ರಸ್ತೆಯಿಂದ ಹೊಳೆಗೆ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಉಳಿದ ಪ್ರಯಾಣಿಕರಿಗೂ ಗಾಯಗಳಾಗಿವೆ.
ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo