Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ ಮುಸ್ಲಿಂ ಸಂಘಟನೆಗಳು 16-3-2022

ಹಿಜಾಬ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪು ನಮಗೆ ಅಸಮಾಧಾನ ತಂದಿದೆ. ಆದುದರಿಂದ, ಗುರುವಾರ  ಒಂದು ದಿನದ ಶಾಂತಿಯುತ ಬಂದ್ ಗೆ ಕರೆ ನೀಡಲಾಗುತ್ತಿದೆ ಎಂದು ಇಮಾರತ್ ಎ ಶರೀಅ ಮುಖ್ಯಸ್ಥ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ತಿಳಿಸಿದ್ದಾರೆ.

ಬುಧವಾರ ನಗರದ ದಾರುಲ್ ಉಲೂಮ್ ಸಬೀಲುರ್ರಶಾದ್ ನಲ್ಲಿ ನಡೆದ ಉಲಮಾಗಳು, ವಿವಿಧ ಸಂಘ ಸಂಸ್ಥೆಗಳ ಪತ್ರಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಈ ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ವಿಸಲು ಪ್ರಯತ್ನಿಸಬಾರದು, ಪ್ರಮುಖವಾಗಿ ಯುವಕರು ಯಾವುದೇ ರೀತಿಯ ರ‌್ಯಾಲಿಗಳನ್ನು ನಡೆಸುವುದಾಗಲಿ, ಘೋಷಣೆಗಳನ್ನು ಕೂಗುವುದಾಗಿ ಮಾಡಬಾರದು ಎಂದು ಅವರು ತಿಳಿಸಿದರು.

ಬಂದ್ ಅತ್ಯಂತ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅಮೀರ್ ಎ ಶರೀಅತ್ ಕರೆ ನೀಡಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo