Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್ ನಿಷೇಧಕ್ಕೆ ಸವಾಲು ಹಾಕಿದ ಹುಡುಗಿಯರು ಭಯೋತ್ಪಾದನಾ ಸಂಸ್ಥೆಯ ಸದಸ್ಯರು :-ಯಶ್‌ಪಾಲ್ ಸುವರ್ಣ ಹೇಳಿಕೆ 16-3-2022

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದೆ. ಈ ನಡುವೆ ಹಿಜಾಬ್ ನಿಷೇಧಕ್ಕೆ ಸವಾಲು ಹಾಕಿದ ಹುಡುಗಿಯರು ಭಯೋತ್ಪಾದನಾ ಸಂಸ್ಥೆಯ ಸದಸ್ಯರು ಎಂದು ಬಿಜೆಪಿ ನಾಯಕ ಯಶ್ ಪಾಲ  ಸುವರ್ಣ ಹೇಳಿದ್ದಾರೆ.

ಹಿಜಾಬ್ ನಿಷೇಧದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿರುವ ಹುಡುಗಿಯರು 'ದೇಶ ವಿರೋಧಿಗಳು' ಮತ್ತು 'ಭಯೋತ್ಪಾದಕ ಸಂಘಟನೆಯ ಸದಸ್ಯರು' ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶಪಾಲ್ ಸುವರ್ಣ ಎಂದಿದ್ದಾರೆ.

"ತಾವು ವಿದ್ಯಾರ್ಥಿಗಳಲ್ಲ, ಆದರೆ ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಹುಡುಗಿಯರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ," ಎಂದು ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರ ಅಸಮಾಧಾನವನ್ನು ಉಲ್ಲೇಖ ಮಾಡಿ ಬಿಜೆಪಿ ನಾಯಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo