ತೆಂಗಿನಕಾಯಿ ಕೊಯ್ಯುವ ಕೆಲಸ ಮಾಡಿಕೊಂಡಿದ್ದ ರವಿ (46) ಎಂಬವರು ಇಂದು ಬೆಳಗ್ಗೆ ಈಶ್ವರನಗರದ ನಿವಾಸಿ ಜೈಕರ್ ಎಂಬವರ ಮನೆಯ ತೆಂಗಿನ ಮರದಿಂದ ತೆಂಗಿನಕಾಯಿ ಕೊಯ್ದು ಇಳಿಯುತ್ತಿರುವಾಗ ಅಕಸ್ಮಿಕವಾಗಿ ಆಯ ತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆಗಾದ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ