Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ :-ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ 18-3-2022

ಹೈಕೋರ್ಟ್ ನೀಡಿದ ತೀರ್ಪಿನ ಅನ್ವಯ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ.

ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಕೊಂಚ ಸಡಿಲಿಕೆ ನೀಡಿತ್ತು. ಇನ್ನುಮುಂದೆ ಮತ್ತೆ ಯಾವುದೇ ಕಾರಣಕ್ಕೂ ಪರೀಕ್ಷೆ ಮತ್ತು ತರಗತಿಯಲ್ಲಿ ಹಿಜಾಬ್ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo