Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕುಂದಾಪುರ:-ತಂದೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಮಗ20-3-2022

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಸ್ವಂತ ಪುತ್ರನೇ ತನ್ನ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಕುಂದಾಪುರದ ಕೋಟೇಶ್ವರದ ಗೋಪಾಡಿಯಲ್ಲಿ ನಡೆದಿದೆ. 

ಇನ್ನು ಹೆಚ್ಚಿನ ಮಾಹಿತಿಯ ಕುರಿತು : ಗೋಪಾಡಿಯ ಹಾಲಾಡಿ ಮನೆ ನಿವಾಸಿ ಸರಸಿಂಹ ಮರಕಾಲ (74) ಕೊಲೆಯಾದವರು. ಪುತ್ರ ರಾಘವೇಂದ್ರ (36) ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ.

ಕೌಟುಂಬಿಕ ದ್ವೇಷದ ಹಿನ್ನೆಲೆ ಮಗ ರಾಘವೇಂದ್ರ ತನ್ನ ತಂದೆಯನ್ನ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo