ಮಂಗಳೂರಿನ ಕುತ್ತಾರಿನ ಕೊರಗಜ್ಜ ಕ್ಷೇತ್ರದ ನಡೆ ಸಮಾರೋಪದಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು. ಮೊದಲು ಬ್ರಿಟಿಷರ ಧ್ಬಜ ಇತ್ತು, ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು.
ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್ನಲ್ಲಿ ಮೂರನೆಯವರ ಬಹುಮತ ಪಡೆದ್ರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ. ಹೀಗೆಯೇ ಮುಂದುವರೆದ್ರೆ ಹಿಂದೂ ಸಮಾಜ ಒಟ್ಟಾಗುತ್ತೆ. ಇವತ್ತು ಕಾಶ್ಮೀರ ಫೈಲ್ಸ್ ನಲ್ಲಿ ನೀವು ನೋಡೋದು ಸಣ್ಣ ತುಂಡಷ್ಟೇ. ದೇಶದಲ್ಲಿ ಧರ್ಮದ ಹತ್ಯೆ ಆದಾಗಲೂ ಷಂಡ ಕಾಂಗ್ರೆಸ್ ಒಪ್ಪಿಕೊಂಡಿತು. ಇವತ್ತು ಅದೇ ರೀತಿ ಹಿಜಾಬ್ ಬಂದಿದೆ, ಕಿತಾಬ್ ಬೇಡ. ಎಲ್ಲಾ ವ್ಯವಸ್ಥೆ ಕೊಟ್ಟರೂ ನಾವು ಪ್ರತ್ಯೇಕವಾದಿ ಅನ್ನೋ ಮನೋಭಾವ ಇದೆ ಇದು ಈ ದೇಶವನ್ನು ಮುಂದೆ ತುಂಡು ಮಾಡುವ ಪ್ರಯತ್ನ ಎಂದರು.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ