ತಮಿಳುನಾಡಿನ ತಿರುನೆಲ್ವೇಲಿ ಎಂಬಲ್ಲಿ ಕೊವಾಯಿ ರಹಮುತುಲ್ಲಾ ಹಾಗು ತಂಜಾವೂರಿನಲ್ಲಿ ಎಸ್.ಜಮಾಲ್ ಮೊಹಮ್ಮದ್ ಉಸ್ಮಾನಿ ಎಂಬಾತನನ್ನು ಶನಿವಾರ ರಾತ್ರಿ ಸೆರೆ ಹಿಡಿಯಲಾಗಿದೆ. ಈ ಇಬ್ಬರು ದುಷ್ಕರ್ಮಿಗಳು ತಮಿಳುನಾಡು ತೌಹೀದ್ ಜಮಾತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವು ದೂರುಗಳು ದಾಖಲಾದ ಬೆನ್ನಲ್ಲೇ ಈ ಆರೋಪಿಗಳಿಗೆ ಪೊಲೀಸರು ಕೈಕೋಳ ತೊಡಿಸಿದ್ದಾರೆ. ಇದೇ ವೇಳೆ ಈ ಇಬ್ಬರ ಹೊರತಾಗಿ ಹಲವರ ವಿರುದ್ಧ ದೂರುಗಳು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಜಾರ್ಖಂಡ್ನಲ್ಲಿ ಬೆಳಗಿನ ವಾಕಿಂಗ್ ವೇಳೆ ಜಿಲ್ಲಾ ನ್ಯಾಯಾಧೀಶರೊಬ್ಬರ ಮೇಲೆ ವಾಹನ ಹರಿಸಿ ಕೊಂದು ಹಾಕಲಾಗಿತ್ತು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕೂಡಾ ಎಲ್ಲಿಗೆ ಬೆಳಗಿನ ವಾಕ್ ಹೋಗುತ್ತಾರೆ ಅನ್ನೋದು ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ಕೊಲೆ ಬೆದರಿಕೆ ಹಾಕಿದ್ದಾನೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ