Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಎಲ್ಲಾ ಹಿಂದೂಗಳು ಹಲಾಲ್ ಉತ್ಪನ್ನಗಳನ್ನ ಬಹಿಷ್ಕರಿಸಬೇಕು:-ಪ್ರಮೋದ್ ಮುತಾಲಿಕ್ ಹೇಳಿಕೆ 30-3-2022

ಬೆಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ನಡೆಸುತ್ತಿರುವ 'ಬಾಯ್ಕಾಟ್ ಹಲಾಲ್' ಹೋರಾಟಕ್ಕೆ ಶ್ರೀರಾಮಸೇನೆ ಸಹ ಬೆಂಬಲ ಸೂಚಿಸಿದೆ. ವಿವಾದ ಕುರಿತು ಹೇಳಿಕೆ ನೀಡಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 'ಭಾರತ ಹಾಗೂ ಕರ್ನಾಟಕವನ್ನು ಹಲಾಲ್ ಮುಕ್ತ ಮಾಡಬೇಕಾಗಿದೆ.

ಎಲ್ಲಾ ಹಿಂದೂಗಳು ಹಲಾಲ್ ಉತ್ಪನ್ನಗಳನ್ನ ಬಹಿಷ್ಕರಿಸಬೇಕು. ಹಿಂದೆ ಅಕ್ಬರ್, ಔರಂಗಜೇಬ್ ಹಿಂದೂಗಳ ಮೇಲೆ ಟ್ಯಾಕ್ಸ್ ಹೇರುತ್ತಿದ್ದರು. ಈಗ ಹಲಾಲ್ ಎಂಬ ವಿಚಾರವನ್ನು ಹೇರಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಸ್ಲಾಮೀಯರು ಹಲಾಲ್ ಬೇಕಿದ್ರೆ ಇರಿಸಿಕೊಳ್ಳಲಿ.

ಆದರೆ ಹಿಂದೂಗಳು ಕೂಡ ಹಲಾಲ್ ಸರ್ಟಿಫಿಕೇಟ್ ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಿಸಲಾಗಿದೆ. ಹಿಂದೂಗಳಿಗೆ ಹಲಾಲ್ ಸರ್ಟಿಫಿಕೇಟ್ ಅಗತ್ಯ ಇಲ್ಲ. ಹಲಾಲ್ ಸರ್ಟಿಫಿಕೇಟ್ ಕೊಡೋದು ಮುಸ್ಲಿಂ ಸಂಸ್ಥೆ. ಹಲಾಲ್ ಸರ್ಟಿಫಿಕೇಟ್​ಗೆ ಕೊಡುವ ದುಡ್ಡು ದೇಶ ವಿರೋಧಿ ಕೃತ್ಯಕ್ಕೆ ಬಳಕೆಯಾಗುತ್ತದೆ. ಪಿಎಫ್​ಐ, ಎಸ್​ಡಿಪಿಐ, ಎಂಐಂನಂಥ ಸಂಘಟನೆಗಳಿಗೆ ಈ ಹಣ ಹೋಗುತ್ತದೆ. ಹಲಾಲ್ ಸರ್ಟಿಫಿಕೇಟ್ ನೀಡೋದು ದೊಡ್ಡ ಉದ್ಯಮ ಆಗಿದೆ. ಮುಂದೆ ಇದು ದೇಶಕ್ಕೆ ಅಪಾಯಕಾರಿ ಆಗಲಿದೆ. ಹೀಗಾಗಿ ಹಲಾಲ್ ಮುಕ್ತ ಕರ್ನಾಟಕ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo