Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಶಂಕರನಾರಾಯಣ:-ಹೊಳೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಗಳು ನೀರು ಪಾಲು 31-3-2022

ಶಂಕರನಾರಾಯಣ: ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ಓದುತಿದ್ದ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಹೊಳೆ ಬಳಿ ತೆರಳಿದ್ದು ಸ್ನಾನಕ್ಕೆಂದು ನೀರಿಗಿಳಿದಿದ್ದರು. ಇನ್ನು ನೀರಿನ ಬಾರಿ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 

ಇದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾದರೂ‌ ಕೂಡ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿ.ಎಸ್.ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಜಿ.ಪಂ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ ಸ್ಥಳಕ್ಕಾಗಮಿಸಿದರು.

ಇನ್ನು ಮೃತ ಯುವಕರ ಸಂಬಂಧಿಗಳ ರೋಧನ ಮುಗಿಲು ಮುಟ್ಟಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo