Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬೆಳ್ಳಾರೆಯಲ್ಲಿ ಹಿಂದೂ ಕಾರ್ಯದರ್ತ ಪ್ರವೀಣ್ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆ, ಪೊಲೀಸರ ಮೇಲೆ ಕಲ್ಲು ತೂರಾಟ ಲಾಠಿಚಾರ್ಜ್27-7-2022

 


ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯದರ್ತ ಪ್ರವೀಣ್ ಹತ್ಯೆ ಖಂಡಿಸಿ ಇಂದು ನಡೆಸುತ್ತಿರುವಂತ ಪ್ರತಿಭಟನೆ ತಾರಕ್ಕೇರಿದೆ. ಹಿಂದೂ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ, ಲಾಠಿಚಾರ್ಜ್ ಕೂಡ ನಡೆಸಲಾಗಿದೆ.ಈ  ವೇಳೆ ಹಿಂದೂ ಕಾರ್ಯಕರ್ತನೋರ್ವ ಗಾಯಗೊಂಡಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪರಿಸ್ಥಿತಿ ಮತ್ತಷ್ಟು ಕೆಂಡವಾಗಿದೆ. ಪ್ರವೀಣ್ ಹತ್ಯೆ ಖಂಡಿಸಿ ಇಂದು ನಡೆಸಲಾಗುತ್ತಿದ್ದಂತ ಪ್ರತಿಭಟನೆಯು ವ್ಯಾಪಕ ಸ್ವರೂಪವನ್ನು ಪಡೆದುಕೊಂಡಿದೆ.




ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಕೆಲವೆಡೆ ವಾಗ್ವಾದ ನಡೆದ್ರೇ.. ಮತ್ತೆ ಕೆಲವು ಕಡೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹಿಂದೂ ಕಾರ್ಯಕರ್ತರು ಪ್ರತಿಭಟನೆ ವೇಳೆ ಕಲ್ಲು ತೂರಿದ ಪರಿಣಾಮ, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಪ್ರತಿಭಟನಾ ನಿರತ ಕಾರ್ಯಕರ್ತರು ಸ್ಥಳದಿಂದ ಕಾಲ್ ಕಿತ್ತಿದ್ದಾರೆ. ಇನ್ನೂ ಪೊಲೀಸರು ಮನಬಂಧಂತೆ ಲಾಠಿ ಬೀಸಿದ ಪರಿಣಾಮ, ಹಿಂದೂ ಕಾರ್ಯಕರ್ತನೊಬ್ಬ ತಲೆ ಹೊಡೆದು ಗಾಯವಾಗಿದೆ. ಆತನನ್ನು ಸ್ಥಳೀಯರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo