ಜಿಲ್ಲೆಯಲ್ಲಿ ಈ ಬಾರಿಯ 75ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಪೂರ್ವತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ಎಂ. ಸೂಚನೆಗಳನ್ನು ನೀಡಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತ್ರಂತ್ರೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ನಮ್ಮ ದೇಶದ 75ನೇ ಸ್ವಾತ್ರಂತ್ರೋತ್ಸವ ಕಾರ್ಯಕ್ರಮವನ್ನು ಈ ಬಾರಿ ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಆಗಸ್ಟ್ 15ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕ, ಎನ್ಸಿಸಿ ಸೇರಿದಂತೆ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.
ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಮುಖಂಡರುಗಳಿಗೆ ಶಿಷ್ಠಾಚಾರದಂತೆ ಆಹ್ವಾನಿಸಬೇಕು ಎಂದ ಅವರು ಎಸೆಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಬೇಕು ಎಂದರು.
ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ, ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.
ಈ ಬಾರಿ ಸ್ವಾತ್ರಂತ್ರ್ಯ ದಿನಾಚರಣೆಯ ಮುನ್ನಾ ದಿನಗಳಾದ ಆಗಸ್ಟ್ 13 ರಿಂದ 15ರವರಗೆ ಪ್ರತಿಯೊಬ್ಬರ ಮನೆಯಲ್ಲಿಯೂ ತ್ರಿವರ್ಣ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡಿದ ಅವರು, ಸ್ವಾತ್ರಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರಜಿಲ್ಲಾಧಿಕಾರಿ ವೀಣಾ ಬಿ.ಎನ್. ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ