Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಶಿವಮೊಗ್ಗ ಘಟನೆ ಆಕಸ್ಮಿಕವಲ್ಲ : ಪ್ರಮೋದ್ ಮುತಾಲಿಕ್16-8-2022


 ಧಾರವಾಡ: ಶಿವಮೊಗ್ಗದಲ್ಲಿ ಸೋಮವಾರ ನಡೆದ ಗಲಾಟೆ ಆಕಸ್ಮಿಕವಾದದ್ದಲ್ಲ. ಮುಂಬರುವ ಗಣೇಶ ಮೆರವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೂರ್ವನಿಯೋಜಿತವಾಗಿ ಈ ಕೃತ್ಯ ನಡೆದಿದೆ ಎಂದು ಪ್ರಮೋದ್ ಮುತಾಲಿಕ್ ದೂರಿದರು.


ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 40 ವರ್ಷದಿಂದ ಹಿಂದೂ ಮಹಾಸಭಾದ ಗಣೇಶ ಮೆರವಣಿಗೆ ಆಗುತ್ತದೆ. ಈ ಹಿಂದೆ ಗಣೇಶ ಮೆರವಣಿಗೆ ಮಸೀದಿ ಮುಂದೆ ಹೋಗಬಾರದೆಂದು ಗಲಾಟೆ ಮಾಡಿದ್ದರು. ಆಗಿನಿಂದಲೇ ಸಂಘರ್ಷ ಆರಂಭವಾಗಿದೆ ಎಂದರು




ಸಾವರ್ಕರ್​ ಓರ್ವ ಪ್ರಖರ ಹಿಂದೂವಾದಿ ಮತ್ತು ರಾಷ್ಟ್ರೀಯವಾದಿ. ಅವರನ್ನು ವಿರೋಧಿಸುವುದು ಸೊಕ್ಕಿನ ನಡೆ. ಈ ವಿರೋಧ ಶುರು ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್‌ಗೆ ನೆಹರೂ, ಇಂದಿರಾ ಗಾಂಧಿ, ಸೋನಿಯಾ, ರಾಹುಲ್ ಮಾತ್ರ ಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಬೇಕಿಲ್ಲ ಎಂದು ಹರಿಹಾಯ್ದರು.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo