Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕುಂದಾಪುರ:-ಬೈಕ್‌ಗೆ ಕಾರ್ ಢಿಕ್ಕಿ ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

Udupi news

 


ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಜಂಕ್ಷನ್‌ಬಳಿ ಬೈಕ್‌ನ್ನು ಓವರ್‌ಟೇಕ್‌ ಮಾಡುವ ಭರಾಟೆಯಲ್ಲಿ ಕಾರೊಂದು ವಿಕಲಚೇತನ ಸವಾರನ ವಾಹನಕ್ಕೆ ಢಿಕ್ಕಿಯಾಗಿದೆ.

ಪ್ರಭಾಕರ್‌ ಆಚಾರ್‌ (42) ಚೂರಿಕೋಡ್ಲಿ ಅವರು ಮೂರು ಚಕ್ರದ ಸ್ಕೂಟರ್‌ನಲ್ಲಿ ಪತ್ನಿ ಸುಲೋಚನಾ, ಪುತ್ರ ಪ್ರಜ್ವಲ್‌(14), ಪೂಜಾ (10) ಅವರನ್ನು ಕುಳ್ಳಿರಿಸಿಕೊಂಡು ಆಜ್ರಿ ಕಡೆಯಿಂದ ನೇರಳಕಟ್ಟೆ ಕಡೆಗೆ ಹೋಗುತ್ತಿದ್ದಾಗ ಅಪಘಾತವಾಗಿದೆ.

ಎಲ್ಲರೂ ಗಾಯಗೊಂಡಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಗಂಭೀರ ಗಾಯಗೊಂಡ ಪ್ರಭಾಕರ್‌ ಆಚಾರ್‌, ಪ್ರಜ್ವಲ್‌ ಹಾಗೂ ಪೂಜಾ ಅವರು ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಮಂಗಳೂರು ವೆನ್‌ಲಾಕ್‌ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo