Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಅಪಘಾತ ಪಡಿಸಿದ ಆರೋಪಿಗೆ ಶಿಕ್ಷೆ

Udupinews


ಉಡುಪಿ:- ದುಡುಕುತನ ಹಾಗೂ ನಿರ್ಲಕ್ಯದಿಂದ ಕಾರು ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದು, ತೀವ್ರ ಸ್ವರೂಪದ ಗಾಯಗೊಳಿಸಿದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

 2020 ಜನವರಿ 7 ರಂದು ಸಂಜೆ 7 ಗಂಟೆಯ ಸುಮಾರಿಗೆ ಕೆಳಾರ್ಕಳ ಬೆಟ್ಟು ನಿವಾಸಿ ಆಲ್ವಿನ್ ಲಾರೆನ್ಸ್ ಎಂಬಾತನು ಪುತ್ತೂರು ಗ್ರಾಮದ ರಾ. ಹೆ 66 ರಲ್ಲಿ ದುಡುಕುತನ ಹಾಗೂ ನಿರ್ಲಕ್ಷö್ಯದಿಂದ ತನ್ನ ಕಾರನ್ನು ಎಡ ಬದಿಗೆ ಚಲಾಯಿಸಿ, ರಸ್ತೆ ಅಂಚಿನಲ್ಲಿ ನಿಂತಿದ್ದ ಜೋಸೆಫ್ ಮಿನೇಜಸ್ ಎಂಬುವವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಹಾಗೂ ಬಲಗಾಲಿನ ಮೂಳೆ ಮುರಿತವಾಗಿರುವ ಹಿನ್ನೆಲೆ, ಸಂಚಾರ ಠಾಣೆಯ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

 ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಆಲ್ವಿನ್ ಲಾರೆನ್ಸ್ ಎಂಬಾತನಿಗೆ 6 ತಿಂಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 2000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

 ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿರುತ್ತಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo