Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿ ನೇಮಕ; ಧರ್ಮೇಂದ್ರ ಪ್ರಧಾನ್ ಉಸ್ತುವಾರಿ, ಅಣ್ಣಾಮಲೈ ಸಹ‌ಉಸ್ತುವಾರಿ

Udupifirst-udupinews-

 


ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಲಹೆಯಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಈ ನೇಮಕದ ಆದೇಶವನ್ನು ಹೊರಡಿಸಿದ್ದಾರೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಧರ್ಮೇಂದ್ರ ಪ್ರಧಾನ್ ಅವರು ಪ್ರಸ್ತುತ ಕೇಂದ್ರ ಶಿಕ್ಷಣ ಮಂತ್ರಿಯಾಗಿದ್ದಾರೆ. ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದಾರೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo