ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ-ಕಾಶ್ಮೀರದವರೆಗೆ ನಡೆದಿದ್ದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ದೊರಕಿತ್ತು. ಮೊದಲನೇ ಹಂತದಲ್ಲಿ ದೊರೆಕಿದ್ದ ಯಶಸ್ಸಿನಿಂದ ಕಾಂಗ್ರೆಸ್ ನಾಯಕರು ಎರಡನೇ ಭಾಗದ ಭಾರತ್ ಜೋಡೋ ಯಾತ್ರೆ ನಡೆಸಲು ಮುಂದಾಗಿದ್ದು, ಈ ಬಾರಿ ಪೂರ್ವದಿಂದ ಪಶ್ಚಿಮ ರಾಜ್ಯಗಳತ್ತ ಪಾದಯಾತ್ರೆ ನಡೆಸಲಿದ್ದಾರೆ.
ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ ಕನ್ಯಾಕುಮಾರಿಯಿಂದ-ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಯಶಸ್ಸು ದೊರೆಕಿತ್ತು. ಎರಡನೇ ಹಂತದಲ್ಲಿ ಗುಜರಾತಿನಿಂದ ಮೇಘಾಲಯದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ.
ಮೊದಲನೇ ಹಂತದಲ್ಲಿ ದಕ್ಷಿಣದಿಂದ ಉತ್ತರ ಭಾರತದತ್ತ ಹೆಜ್ಜೆ ಹಾಕಲಾಗಿತ್ತು. ಈ ಬಾರಿ ಪೂರ್ವದಿಂದ ಪಶ್ಚಿಮ ರಾಜ್ಯಗಳತ್ತ ಯಾತ್ರೆ ನಡೆಸಲು ಉದ್ದೇಶಿಸಲಾಗಿದೆ. ಗುಜರಾತ್ನಿಂದ ಎರಡನೇ ಹಂತದ ಯಾತ್ರೆ ಆರಂಭವಾಗಲಿದೆ. ಈ ಸಂಬಂಧ ವೀಕ್ಷಕರನ್ನೂ ನೇಮಿಸಲಾಗಿದ್ದು ಸಮಿತಿ ನೀಡುವ ವರದಿ ಆಧರಿಸಿ ಸಿದ್ದತೆಗಳನ್ನು ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಲೆ ಮಾಹಿತಿ ನೀಡಿದ್ದಾರೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ