ಮಂಗಳೂರು:- ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಮುಗಿಸಿ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ.
ಬೋಳಿಯಾರು ನಿವಾಸಿಗಳಾದ ಸುರೇಶ್ ಹಾಗೂ ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು.
ಮೋದಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಬೋಳಿಯಾರ್ ವಿಜಯೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಮುಗಿಸಿ ಅವರು ಬೋಳಿಯಾರು ಪೇಟೆಯಲ್ಲಿ ನಿಂತಿದ್ದರು. ಈ ವೇಳೆ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ