Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ 10 ಮಂದಿ ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು


 ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ 10 ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ಕಾಲೇಜಿನ ಪ್ರಾಂಶುಪಾಲರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ ಶುಕ್ರವಾರ ಮಣಿಪಾಲ್ ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.  ಹೆಬ್ರಿ ತಾಲೂಕಿನ ಶ್ರೀಶೈಲ, ಚಾರ ಗ್ರಾಮದ ಸೌರಭ್ ಬಲ್ಲಾಳ್ ಅವರು ಮಣಿಪಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿಜೆಪಿ ಕಾರ್ಯಕರ್ತರು ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದ ಕೃತ್ಯ ಎಸಗಿದ್ದರು ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ಗಿರೀಶ್, ಪೃಥ್ವಿರಾಜ್ ಶೆಟ್ಟಿ ಸೇರಿದಂತೆ 10 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo