Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಚ್ಚಿಲ: ದೇವಸ್ಥಾನಕ್ಕೆ ಬಂದಿದ್ದವರ ಕಾರಿನ ಗಾಜು ಒಡೆದು ಲ್ಯಾಪ್ ಟಾಪ್ ಕಳವು

Udupinews


 ಉಚ್ಚಿಲ: ದಸರಾ ಹಬ್ಬದ ನಡುವೆ ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳವು ಮಾಡಲಾಗಿದೆ. ಉಡುಪಿಯ ಉಚ್ಚಿಲ ದೇವಸ್ಥಾನದ ಹೊರಬಾಗದಲ್ಲಿ ನಿಲ್ಲಿಸಿದ್ದ ಕಾರಿನ ಎಡಬದಿಯ ಗಾಜು ಒಡೆದು ಲ್ಯಾಪ್ಟಾಪ್ ಅನ್ನು ಕಳವು ಮಾಡಲಾಗಿದೆ.

ಉಡುಪಿ ನಿವಾಸಿ ವಸಂತ್ ಅವರು ಕುಟುಂಬ ಸಮೇತ ನವರಾತ್ರಿಯ ಪ್ರಯುಕ್ತ ಉಚ್ಚಿಲ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸು ಕಾರಿನ ಬಳಿ ಬಂದಾಗ ವಿಷಯ ಬೆಳಕಿಗೆ ಬಂದಿದೆ. ದೇವಸ್ಥಾನದ ಬಳಿ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಖದೀಮರು ಸುಮಾರು 45,000 ಬೆಲೆಬಾಳುವ ಲ್ಯಾಪ್ಟಾಪ್‌ ಅನ್ನು ಕದ್ದಿದ್ದಾರೆ.ಪೊಲೀಸರಿಗೆ ವಿಷಯ ತಿಳಿಸಿದಾಗ ಲ್ಯಾಪ್ಟಾಪ್ ನ ಸೀರಿಯಲ್ ನಂಬ‌ರ್ ಇದ್ದರೆ ಮಾತ್ರ ಕೇಸ್ ಮಾಡಲು ಸಾಧ್ಯ ಎಂದು ತಿಳಿಸಿದ್ದಾರೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo