Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧದ ಆಧಾರರಹಿತ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸಿದ್ಧ: ಶಾಸಕ ಯಶ್ಪಾಲ್ ಸುವರ್ಣ

Udupinews

 






ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧದ ಆಧಾರರಹಿತ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸಿದ್ಧ: ಶಾಸಕ ಯಶ್ಪಾಲ್ ಸುವರ್ಣ 


ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ಬ್ಯಾಂಕಿನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾಧ್ಯಮಗಳ ಮುಂದೆ ಸುಳ್ಳು ಮಾಹಿತಿ ನೀಡುತ್ತಿದ್ದು, ಬ್ಯಾಂಕಿನ ಆಡಳಿತ ಮಂಡಳಿ ಈಗಾಗಲೇ ಕಾನೂನು ಕ್ರಮಕ್ಕೆ ಮುಂದಾಗಿದ್ದು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಬ್ಯಾಂಕಿನ ವಿರುದ್ಧ ಆರೋಪ ಮಾಡುತ್ತಿರುವ ವ್ಯಕ್ತಿಗಳು ಬ್ಯಾಂಕಿನಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ಬಗ್ಗೆ ಸಹಕಾರಿ ನ್ಯಾಯಾಲಯದಲ್ಲಿ ಸಾಲ ಮರುಪಾವತಿಗೆ ಆದೇಶ ನೀಡಿದ್ದು ತಪ್ಪಿದಲ್ಲಿ ಆಸ್ತಿ ಜಪ್ತಿಗೂ ಸೂಚನೆ ನೀಡಿದೆ.

ಮಹಾಲಕ್ಷ್ಮೀ ಬ್ಯಾಂಕ್, ಸಹಕಾರಿ ಇಲಾಖೆ ಹಾಗೂ ಆರ್‌ಬಿಐ ನಿಯಮಾವಳಿಯಂತೆ ಸಹಕಾರಿ ತತ್ವದಡಿ ಪಾರದರ್ಶಕ ರೀತಿಯಲ್ಲಿ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿದ್ದು, ಈ ಬಗ್ಗೆ ರಾಜ್ಯ ಸಹಕಾರ ಇಲಾಖೆ ಅಥವಾ ಇಡಿ, ಸಿಬಿಐ ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಹಾಗೂ ಬ್ಯಾಂಕಿನ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo