ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮೇ 2 ರ ರಾತ್ರಿ 11 ಗಂಟೆಯಿಂದ ಮೇ 3 ರ ಬೆಳಗ್ಗೆ 11 ಗಂಟೆಯವರೆಗೆ ನಿರ್ಬಂಧ ಸಡಿಲಿಸಿ ಕೇವಲ 8 ಜನರಿಗೆ ಮಾತ್ರ ಪ್ರವೇಶಿಸಲು ಅನುಮತಿನೀಡಲಾಗಿದೆ. ಮೇ 3 ರ ಬೆಳಗ್ಗೆ 11 ಗಂಟೆಯಿಂದ ಮೇ 4 ರ ಬೆಳಗ್ಗೆ 5 ಗಂಟೆಯವರೆಗೆ ಯಾರು ಪ್ರವೇಶಿಸದಂತೆ ನಿರ್ಬಂದಿಸಿ ಕಲಂ 163 ಬಿ. ಎನ್. ಎಸ್. ಎಸ್ ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅದೇಶಿಸಿರುತ್ತಾರೆ.
ಈ ಸಂದರ್ಭದಲ್ಲಿ ವಿವಾದಿತ ಸರಕಾರಿ ಸ್ಥಳದಲ್ಲಿ ಮೇ 2 ರಂದು ರಾತ್ರಿ 11 ಗಂಟೆಯಿಂದ ಮೇ 3 ರ ಬೆಳಿಗಿನ 11:00 ಗಂಟೆಯ ತನಕ ನಿರ್ಭಂದ ಸಡಿಲಿಸಿ ಕೇವಲ 8 ಜನರಿಗೆ ಮಾತ್ರ ಪ್ರವೇಶಿಸಲು ಅನುನುತಿ ನೀಡಲಾಗಿದೆ.
ಮೇ 3 ರಂದು ಬೆಳಗ್ಗೆ 11 ಗಂಟೆಯಿಂದ ಮೇ 4 ರ ಬೆಳಗ್ಗೆ 5 ಗಂಟೆಯವರೆಗೆ ಯಾರು ಪ್ರವೇಶಿಸದಂತೆ ನಿಭಂದಿಸಲಾಗಿದೆ.
ಶಸ್ತ್ರಾಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು, ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ.
ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಅವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೋಗ ಮಾಡುವುದು, ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ
popikala
ಪ್ರತ್ಯುತ್ತರಅಳಿಸಿ