Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು


ಬ್ರಹ್ಮಾವರ: ಅನುತ್ತೀಣರಾದ ಚಿಂತೆಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ರಾಮ ಎಂಬವರ ಮಗಳು ರಶ್ಮಿತಾ(20) ಎಂದು ಗುರುತಿಸ ಲಾಗಿದೆ. ರಶ್ಮಿತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು 6 ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದು, ಕಳೆದ ಎರಡೂವರೆ ತಿಂಗಳಿಂದ ಮಾನಸಿಕ ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೇ ಕಾರಣದಿಂದ ಮಾನಸಿಕವಾಗಿ ನೊಂದ ಆಕೆ ಜೀವನದಲ್ಲಿ ಜಿಗುಪ್ಸೆ ಗೊಂಡು ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo