ಟೆಸ್ಟ್ ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿವೃತ್ತಿ

 

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾಗಲೇ, ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಸುದ್ದಿ ಅಭಿಮಾನಿಗಳಿಗೆ ತೀವ್ರ ಆಘಾತವನ್ನು ಉಂಟು ಮಾಡಿದೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಸಹ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ.

ಇತ್ತೀಚಿಗೆ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಿವರತ್ತಿಯ ನಿರ್ಧಾರವನ್ನು ಪ್ರಕಟಿಸಿದ್ದರು. ಅಲ್ಲದೆ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಐಪಿಎಲ್‌ ನಡೆಯುತ್ತಿರುವಾಗಲೇ ರೋಹಿತ್ ಶರ್ಮಾ ಅವರ ಈ ನಿರ್ಧಾರ ನಿಜಕ್ಕೂ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಭಾರತ ಇಂಗ್ಲೆಂಡ್‌ ಪ್ರವಾಸವನ್ನು ಆರಂಭಿಸುವ ಮುನ್ನ ರೋಹಿತ್‌ ಈ ನಿರ್ಧಾರವನ್ನು ತೆಗೆದುಕೊಂಡಿದ್ದರು. ಈಗ ವಿರಾಟ್‌ ಸಹ ಇದೇ ಹಾದಿ ತುಳಿದಂತೆ ಕಾಣುತ್ತಿದೆ.

ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲ
ವರದಿಗಳ ಅನುಸಾರ ಇಂಗ್ಲೆಂಡ್‌ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಭಾರತ ತಂಡವನ್ನು ಪ್ರಕಟಿಸಬೇಕಾಗುತ್ತದೆ. ಇದೇ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಂತಹ ಅನುಭವಿ ಆಟಗಾರರು ತಂಡಕ್ಕೆ ಅಲಭ್ಯರಾದಲ್ಲಿ ದೊಡ್ಡ ಸವಾಲನ್ನು ಎದುರಿಸಬೇಕಾಗುತ್ತದೆ. ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್‌ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, ಟೀಕೆಗೆ ಗುರಿಯಾಗಿದ್ದರು. ಆಗಿನಿಂದಲೂ ವಿರಾಟ್‌ ಇತಂಹದೊಂದು ನಿರ್ಧಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ವಿರಾಟ್‌ ಕೊಹ್ಲಿ ಸಾಧನೆ
ವಿರಾಟ್ ಕೊಹ್ಲಿ 123 ಟೆಸ್ಟ್‌ ಪಂದ್ಯಗಳಲ್ಲಿ 9230 ರನ್‌ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 46 ಆಗಿದೆ. ಒಟ್ಟಾರೆ ವಿರಾಟ್‌ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.


ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ


ಉಡುಪಿ: ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ.

ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಘಾತರಿಂದ ನಿಧನರಾಗಿದ್ದಾರೆ.

ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ರಾಕೇಶ್ ಪೂಜಾರಿ ಈಗ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ-ಪಾಕ್ ಉದ್ವಿಗ್ನತೆ: ಯಕ್ಷಗಾನದಲ್ಲೂ ಪ್ರತಿಧ್ವನಿಸಿದ 'ಆಪರೇಷನ್ ಸಿಂಧೂರ'!

 


ಉಡುಪಿ, ಮೇ ೯: ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನ ಕೇವಲ ಪುರಾಣ ಕಥೆಗಳಿಗೆ ಸೀಮಿತವಾಗದೆ ಸಮಕಾಲೀನ ವಿಷಯಗಳಿಗೂ ಸ್ಪಂದಿಸುತ್ತಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಘ್ನ ಪರಿಸ್ಥಿತಿ ಹಾಗೂ ಭಾರತವು ನಡೆಸಿದ 'ಆಪರೇಷನ್ ಸಿಂಧೂರ'ದ ಕುರಿತಾದ ಸಂಭಾಷಣೆಯೊಂದು ಯಕ್ಷಗಾನದ ರಂಗಸ್ಥಳದಲ್ಲಿ ಕೇಳಿಬಂದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಾವಂಜೆ ಮೇಳದ ಕಲಾವಿದ ದಿನೇಶ್ ಶೆಟ್ಟಿ ಅವರು ಆಪರೇಷನ್ ಸಿಂಧೂರದ ಕುರಿತು ಮಾತನಾಡುತ್ತಿರುವ ವಿಡಿಯೋವನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ದಿನೇಶ್ ಶೆಟ್ಟಿ ಅವರು, "ಈ ಪವಿತ್ರವಾದ ನೆಲದಲ್ಲಿ ನಾನು ಹುಟ್ಟಿದವನು. ಪವಿತ್ರವಾದ ಸಂಸ್ಕಾರವನ್ನು ಪಡೆದವನು. ಈ ನೆಲವನ್ನು ನಾವು ತಾಯಿಯೆಂದು ಕರೆಯುತ್ತೇವೆ. ತಾಯಿಯೆಂದು ಕರೆಯುವ ಈ ನೆಲ ಬಿಟ್ಟರೆ ನಮಗೆ ಬೇರೊಂದಿಲ್ಲ. ಹೀಗಾಗಿ ನಮಗೆ ದೇಶಪ್ರೇಮವನ್ನು ಕಲಿಸಿದೆ, ದೇಶದ್ರೋಹ ಮಾಡುವುದನ್ನಲ್ಲ" ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ತ್ರೀ ವೇಷಧಾರಿಯೊಬ್ಬರು, "ಈ ತಾಯಿಯ ಸಿಂಧೂರ ಅಳಿಸಲು ಬಂದರೆ ಏನು ಮಾಡೋದು?" ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ದಿನೇಶ್ ಶೆಟ್ಟಿ ಅವರು, "ತಾಯಿಯ ಸಿಂಧೂರವನ್ನು ಒರೆಸುತ್ತೇನೆಂದು ಬಂದರೆ, ಈ ನೆಲದ ಒಬ್ಬಳು ಹೆಣ್ಣಿನ ಸಿಂಧೂರ ಒರೆಸಿದರೆ ವೈರಿಗಳ ಸಾವಿರಾರು ಮಡದಿಯಂದಿರ ಸಿಂಧೂರ ಅಳಿಸುವುದಕ್ಕೆ ನಾವೆಲ್ಲಾ ಸಿದ್ಧರಾಗಿ ನಿಂತಿದ್ದೇವೆ" ಎಂದು ದಿಟ್ಟ ಉತ್ತರ ನೀಡಿದ್ದಾರೆ.

ಕಲಾವಿದರ ಈ ದೇಶಭಕ್ತಿಪೂರಿತ ಮಾತುಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಯಕ್ಷಗಾನದಂತಹ ಕಲೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಪ್ರಸ್ತುತ ವಿದ್ಯಮಾನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ದೇಶಪ್ರೇಮವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.



ದೇಶದಾದ್ಯಂತ ಹೈಅಲರ್ಟ್: 24 ಏರ್ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ


ನವದೆಹಲಿ: ಪಾಕಿಸ್ತಾನ ಕ್ಷಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.

ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮಾಡಿಕೊಳ್ಳುವಂತೆ ತಿಳಿಸಿವೆ.

ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ.

ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.


ಉಡುಪಿ : ಗ್ರಾ.ಪಂ. ಅಧ್ಯಕ್ಷರ ಆಯ್ಕೆ : ಚುನಾವಣಾಧಿಕಾರಿಗಳ ನೇಮಕ…!!


ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನ
ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು,

ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರೇಷನ್ ಸಿಂಧೂರ ಮೂಲಕ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ ಒದಗಿಸಿದ ನರೇಂದ್ರ ಮೋದಿ ಸರ್ಕಾರ: ಯಶ್ಪಾಲ್ ಸುವರ್ಣ


ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ'ದ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ಮತ್ತು ಜೈಶೆ ಮೊಹಮ್ಮದ್ ಸಂಘಟನೆಗಳ 9 ನೆಲೆಗಳನ್ನು ಧ್ವಂಸಗೊಳಿಸಿ, ನೂರಾರು ಮತಾಂಧ ಉಗ್ರರ ಮಾರಣಹೋಮ ನಡೆಸಿ ಉಗ್ರವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ಸಾರುವ ಮೂಲಕ ಭಯೋತ್ಪಾದಕರ ಗುಂಡಿಗೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನ್ಯಾಯ ಒದಗಿಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

26 ಅಮಾಯಕರನ್ನು ಬಲಿಪಡೆದ ಉಗ್ರರರನ್ನು ಪಾಕಿಸ್ತಾನದ ಒಳಗಡೆ ಹೋಗಿ ಭಾರತೀಯ ಸೇನೆ ಹೊಡೆದುರುಳಿಸಿದೆ. ಯುದ್ಧದ ಉದ್ವಿಗ್ನತೆ ನಡುವೆಯೇ ಪಾಕ್‌ ವಿರುದ್ಧ ಭಾರತ ಸೇಡನ್ನು ತೀರಿಸಿಕೊಂಡಿದ್ದು, ‌ಪಾಕ್‌ ಹಾಗೂ ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿರುವ ಭಾರತ ಉಗ್ರರ ಹುಟ್ಟಡಗಿಸಿ ಪಹಲ್ಗಾಮ್‌ ದಾಳಿಗೆ ಆಪರೇಷನ್‌ ಸಿಂಧೂರ ಮೂಲಕ ಭಾರತ ಪ್ರತೀಕಾರವನ್ನು ತೀರಿಸಿಕೊಂಡಿದೆ.

ಭಾರತೀಯ ಹಿಂದೂ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸರ್ಕಾರ ‘ಆಪರೇಷನ್‌ ಸಿಂಧೂರ’ ಎಂದು ಕಾರ್ಯಾಚರಣೆಗೆ ನಾಮಕರಣ ಮಾಡಿ ಅತ್ಯಂತ ಯಶಸ್ವಿಯಾಗಿ ಅತ್ಯಂತ ಕ್ಷಿಪ್ರ ಹಾಗೂ ಪರಾಕ್ರಮ ಮೆರೆದು ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯ ರಕ್ಷಣಾ ಸಲಹೆಗಾರರಾದ ಶ್ರೀ ಅಜಿತ್ ಧೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಹಾಗೂ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಪರಾಕ್ರಮ ಮೆರೆದ ವೀರ ಸೈನಿಕರಿಗೆ ದೇಶದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ದೇಶದ ಜನತೆ ನರೇಂದ್ರ ಮೋದಿ ಸರ್ಕಾರದ ಮೇಲೆ ಭರವಸೆ ಇಟ್ಟು ಮತದಾನ ಮಾಡಿದ ಪ್ರತಿಯೋರ್ವ ಭಾರತೀಯನ ಮತಕ್ಕೆ ಇಂದು ಗೌರವ ಸಲ್ಲಿಸುವ ಕೆಲಸವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ, ಗೃಹ ಸಚಿವ ಶ್ರೀ ಅಮಿತ್ ಶಾ, ರಕ್ಷಣಾ ಸಚಿವ ಶ್ರೀ ರಾಜನಾಥ ಸಿಂಗ್ ಹಾಗೂ ಸಚಿವ ಸಂಪುಟದ ಸಚಿವರು ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಕಲಬುರಗಿಗೆ ಕೊನೆ ಸ್ಥಾನ


ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮೇ 02) ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಒಟ್ಟಾರೆ ಶೇ. 66.14 ಮಕ್ಕಳು ತೇರ್ಗಡೆಯಾಗಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದರೆ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ದಕ್ಷಿಣ ಕನ್ನಡ (91.12%) ಹಾಗೂ ಉಡುಪಿ ಜಿಲ್ಲೆ(89.96%) ಹಾಗೂ ಉತ್ತರ ಕನ್ನಡ ಜಿಲ್ಲೆಗೆ(83.19%) ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಸಿಕ್ಕಿದೆ. ಕಲಬುರಗಿ ಜಿಲ್ಲೆಗೆ ರಾಜ್ಯದಲ್ಲಿ ಕೊನೆ ಸ್ಥಾನ ದೊರೆತಿದೆ.

ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಇಂದು ಬೆಳಗ್ಗೆ 11.30ಕ್ಕೆ ಮಂಡಳಿಯ ಅಧಿಕಾರಿಗಳ ಜತೆ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಪ್ರಕಟಿಸಿದರು. ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ಬಾರಿ 22 ವಿದ್ಯಾರ್ಥಿಗಳುನ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕದಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಹುಡುಗರು ಮತ್ತು 4,34,884 ಹುಡುಗಿಯರು ಪರೀಕ್ಷೆಗೆ ದಾಖಲಾಗಿದ್ದರು

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.9 ಲಕ್ಷ ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ 10 ನೇ ತರಗತಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 4.5 ಲಕ್ಷ ಹುಡುಗರು ಮತ್ತು 4.3 ಲಕ್ಷ ಹುಡುಗಿಯರು ವಾರ್ಷಿಕ ಮಂಡಳಿ ಪರೀಕ್ಷೆಗಳಲ್ಲಿ ಭಾಗವಹಿಸಿದ್ದರು. ಒಟ್ಟಾರೆ ಉತ್ತೀರ್ಣ ಶೇಕಡಾವಾರು 73.40 ರಷ್ಟಿತ್ತು, ಇದು 2023 ರಲ್ಲಿ 83.89 ಪ್ರತಿಶತ ಮತ್ತು 2022 ರಲ್ಲಿ 85.13 ಪ್ರತಿಶತದಿಂದ ಕಡಿಮೆಯಾಗಿದೆ.


ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಇಂದು ಮಂಗಳೂರು ಬಂದ್; ಉಡುಪಿ - ಮಂಗಳೂರು ಬಸ್ ಸಂಚಾರ ಸ್ಥಬ್ಧ

ಉಡುಪಿ : ಕೊಡವೂರಿನ ಜುಮಾದಿ ಕೋಲ ಆಚರಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

 


ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮೇ 2 ರ ರಾತ್ರಿ 11 ಗಂಟೆಯಿಂದ ಮೇ 3 ರ ಬೆಳಗ್ಗೆ 11 ಗಂಟೆಯವರೆಗೆ ನಿರ್ಬಂಧ ಸಡಿಲಿಸಿ ಕೇವಲ 8 ಜನರಿಗೆ ಮಾತ್ರ ಪ್ರವೇಶಿಸಲು ಅನುಮತಿನೀಡಲಾಗಿದೆ. ಮೇ 3 ರ ಬೆಳಗ್ಗೆ 11 ಗಂಟೆಯಿಂದ ಮೇ 4 ರ ಬೆಳಗ್ಗೆ 5 ಗಂಟೆಯವರೆಗೆ ಯಾರು ಪ್ರವೇಶಿಸದಂತೆ ನಿರ್ಬಂದಿಸಿ ಕಲಂ 163 ಬಿ. ಎನ್. ಎಸ್. ಎಸ್ ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ವಿವಾದಿತ ಸರಕಾರಿ ಸ್ಥಳದಲ್ಲಿ ಮೇ 2 ರಂದು ರಾತ್ರಿ 11 ಗಂಟೆಯಿಂದ ಮೇ 3 ರ ಬೆಳಿಗಿನ 11:00 ಗಂಟೆಯ ತನಕ ನಿರ್ಭಂದ ಸಡಿಲಿಸಿ ಕೇವಲ 8 ಜನರಿಗೆ ಮಾತ್ರ ಪ್ರವೇಶಿಸಲು ಅನುನುತಿ ನೀಡಲಾಗಿದೆ.

ಮೇ 3 ರಂದು ಬೆಳಗ್ಗೆ 11 ಗಂಟೆಯಿಂದ ಮೇ 4 ರ ಬೆಳಗ್ಗೆ 5 ಗಂಟೆಯವರೆಗೆ ಯಾರು ಪ್ರವೇಶಿಸದಂತೆ ನಿಭಂದಿಸಲಾಗಿದೆ.

ಶಸ್ತ್ರಾಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು, ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ.

ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಅವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೋಗ ಮಾಡುವುದು, ಮತ್ತು ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿಯು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ: ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಹತ್ಯೆ


ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

 ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು.

ಪೊಲೀಸ್ ಮೂಲಗಳ ಪ್ರಕಾರ, ರಾತ್ರಿ ವೇಳೆ ಸುಹಾಸ್ ಶೆಟ್ಟಿ ಮೇಲೆ ನಾಲ್ವರು ದುಷ್ಕರ್ಮಿಗಳು ಹೊಂಚು ಹಾಕಿ ತಲವಾರುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನು ತಕ್ಷಣವೇ ಸ್ಥಳೀಯರು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.

ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಎಂಬಾತ ಕೊಲೆಯಾಗಿದ್ದನು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚೆಗಷ್ಟೇ ಸುಹಾಸ್ ಶೆಟ್ಟಿ ಜೈಲಿನಿಂದ ಬಿಡುಗಡೆಯಾಗಿದ್ದನು. ಬಿಡುಗಡೆಯಾದ ನಂತರ ಆತ ಯಾವುದೇ ಸಂಘಟನೆಯಲ್ಲಿ ಸಕ್ರಿಯನಾಗಿರಲಿಲ್ಲ ಎಂದು ತಿಳಿದುಬಂದಿದೆ.

ಸುಹಾಸ್ ಶೆಟ್ಟಿ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯ ಮುಂದೆ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ಡಾ.ವೈ. ಭರತ್ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಹಲವು ಕೊಲೆ ಯತ್ನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆ ಮಾಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

 ಪ್ರಾಥಮಿಕ ತನಿಖೆಯ ಪ್ರಕಾರ, ಫಾಜಿಲ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ವಾತಾವರಣವನ್ನು ಸೃಷ್ಟಿಸುವ ಸಾಧ್ಯತೆ ಇದೆ. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ…!!

 


ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮತ್ತೊಮ್ಮೆ ತಿರಸ್ಕರಿಸಿ ಮಂಗಳವಾರ ಆದೇಶ ನೀಡಿದೆ.

ಕೆಲವು ದಿನಗಳ ಹಿಂದೆ ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಕಳೆದ ವಾರ ಪ್ರತಿಮಾ ಜಾಮೀನು ಕೋರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಇಲ್ಲಿ ಅರ್ಜಿ ಸಲ್ಲಿಸಿದ್ದರು. ಎರಡನೇ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿರುವುದರಿಂದ ತನಗೂ ಜಾಮೀನು ನೀಡುವಂತೆ ಪ್ರತಿಮಾ ಕೋರಿಕೊಂಡಿದ್ದಳು.

ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿ, ಎರಡನೇ ಆರೋಪಿಗೆ ಜಾಮೀನು ನೀಡಿದ್ದರೂ ಈಕೆಗೆ ಜಾಮೀನು ನೀಡಲು ಆಗುವುದಿಲ್ಲ. ಅವರಿಬ್ಬರ ಮೇಲಿನ ಆರೋಪಕ್ಕೆ ಸಾಮ್ಯತೆ ಇಲ್ಲ. ಆದುದರಿಂದ ಆಕೆಯ ಜಾಮೀನು ಅರ್ಜಿ ತಿರಸ್ಕಾರ ಮಾಡಬೇಕು ಎಂದು ವಾದಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಈಕೆ ಪ್ರಿಯಕರ ದಿಲೀಪ್ ಹೆಗ್ಡೆ ಜೊತೆ ಸೇರಿ 2024ರ ಅ.20ರಂದು ತನ್ನ ಪತಿ ಬಾಲಕೃಷ್ಣ ಪೂಜಾರಿ ಅವರನ್ನು ಕೊಲೆ ಮಾಡಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅ.25ರಂದು ಅಜೆಕಾರು ಪೊಲೀಸರು ಬಂಧಿಸಿದ್ದರು.

© all rights reserved
made with by templateszoo